ಸಿಎಂ, ಡಿಸಿಎಂ ಜತೆ ಸಮಾಲೋಚನೆ ಸಭೆ ನಡೆಸಿದ ರಾಹುಲ್‌ ಗಾಂಧಿ

sampriya

ಶುಕ್ರವಾರ, 7 ಜೂನ್ 2024 (13:18 IST)
Photo By X
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರು ಸಮಾಲೋಚನೆ ನಡೆಸಿದರು. 

ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಇಂದು ಸಮಾಲೋಚನೆ ಸಭೆ ನಡೆಸಿ ಮಾತನಾಡಿದರು. ಇನ್ನೂ ಸಮಾಲೋಚನೆ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರು ಭಾಗವಹಿಸಿದರು.

ಇನ್ನೂ ರಾಹುಲ್‌ ಗಾಂಧಿ ಅವರು ಕರ್ನಾಟಕ ಬಿಜೆಪಿ ಘಟಕ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಖುದ್ದು ವಿಚಾರಣೆಗೆ ಹಾಜರಾಗಲು ಇಂದು ನಗರಕ್ಕೆ ಆಗಮಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಅವರು ಸ್ವಾಗತಿಸಿದರು.

ಇದೀಗ ರಾಹಲ್‌ ಗಾಂಧಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ