ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ರಾಹುಲ್ ಗಾಂಧಿ ಭರವಸೆ

ಸೋಮವಾರ, 12 ಫೆಬ್ರವರಿ 2018 (14:02 IST)
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರದಿಂದ ಶಿಫಾರಸು ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭರವಸೆ ನೀಡಿದ್ದಾರೆ.
 
ಸಿಂಧನೂರಿನಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ದಲಿತ ಮುಖಂಡರೊಂದಿಗೆ ರಾಹುಲ್ ಗಾಂಧಿ ಮಾತುಕತೆ ನಡೆಸಿದ್ದು, ಈ ವೇಳೆ ವರದಿ ಜಾರಿಗೆ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ ಎಂದು ಮುಖಂಡರು ಹೇಳಿಕೊಂಡಿದ್ದಾರೆ.
 
ಪ್ರತ್ಯೇಕವಾಗಿ ದಲಿತ ಮುಖಂಡರೊಂದಿಗೆ ರಾಹುಲ್ ಗಾಂಧಿ ಅವರು 10 ನಿಮಿಷ ಮಾತುಕತೆ ನಡೆಸಿದ್ದು, ಈ ಭಾರಿ ವಿಧಾನಸಭೆ ಚುನಾವಣೆಯಲ್ಲಿ ಅಸ್ಪೃಶ್ಯ ಜಾತಿಯವರಿಗೆ ಆದ್ಯತೆ ಮೇರೆಗೆ ಟಿಕೆಟ್ ನೀಡುವುದಾಗಿ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ