ಮೋದಿ ಸರ್ವಾಧಿಕಾರಿ ಎಂದ ರಾಹುಲ್ ಗಾಂಧಿ

ಬುಧವಾರ, 19 ಸೆಪ್ಟಂಬರ್ 2018 (21:45 IST)
ಕೇಂದ್ರ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಛತ್ತೀಸಗಢದ ಬಿಲಾಸ್ ಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿದರು. ರಾಜಕೀಯ ಕಿರುಕುಳದಿಂದ ಜನರ ಮನಸ್ಸಿನಲ್ಲಿ ಕೆಟ್ಟಸ್ಥಾನ ಯಾವತ್ತಿಗೂ ಪಡೆಯಬೇಕಾಗುತ್ತದೆ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಕಾರ್ಯಕರ್ತರು, ಮುಖಂಡರು ಗಾಯಗೊಂಡಿದ್ದಾರೆ ಎಂದಿರುವ ರಾಹುಲ್, ಬಿಜೆಪಿ ನೇತೃತ್ವದ ರಮಣ್ ಸಿಂಗ ಸರಕಾರವನ್ನು ತರಾಟೆ ತೆಗೆದುಕೊಂಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ