ಬಸವಣ್ಣನ ನೆಲದಲ್ಲೇ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್ ಗಾಂಧಿ

ಸೋಮವಾರ, 12 ಫೆಬ್ರವರಿ 2018 (09:04 IST)
ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
 

ಕೊಪ್ಪಳದಲ್ಲಿ ಭಾಷಣ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮಹಾನ್ ಸುಳ್ಳುಗಾರ, ಬಸವಣ್ಣನ ನೆಲದಲ್ಲಿ ನಿಂತು ಸುಳ್ಳು ಹೇಳ್ತಾರೆ. ಅವರು ಹೇಳಿದ್ದೊಂದನ್ನೂ ಮಾಡುತ್ತಿಲ್ಲ. ಖಜಾನೆಯಲ್ಲಿ ಹಣವಿದ್ದರೂ ರೈತರಿಗೆ ನೀಡುತ್ತಿಲ್ಲ. ಬಂಡವಾಳಶಾಹಿಗಳ ಪರ ಕೇಂದ್ರ ಕೆಲಸ ಮಾಡುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

ಇಂದೂ ರಾಹುಲ್ ರೋಡ್ ಶೋ ಕಾರ್ಯಕ್ರಮಗಳು ಮುಂದುವರಿಯಲಿವೆ. ಸಾರ್ವಜನಿಕ ಕಾರ್ಯಕ್ರಮಗಳ ನಡುವೆ ಸ್ಥಳೀಯ ದೇವಾಲಯಗಳಿಗೂ ರಾಹುಲ್ ಭೇಟಿ ನೀಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ