ಜ್ವರದ ನಡುವೆಯೂ ರಾಜ್ಯದಲ್ಲಿ ರಾಹುಲ್

ಶನಿವಾರ, 12 ಆಗಸ್ಟ್ 2017 (11:21 IST)
ಬೆಂಗಳೂರು: ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಯಚೂರಿಗೆ ಆಗಮಿಸುತ್ತಿರುವ ರಾಹುಲ್ ಗಾಂಧಿಗೆ ಅನಾರೋಗ್ಯ ಕಾಡುತ್ತಿದೆ. ಜ್ವರದಿಂದ ಬಳಲುತ್ತಿರುವ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿಸಿದೆ.

 
ಈಗಾಗಲೇ ಬಳ್ಳಾರಿ ವಿಮಾನ  ನಿಲ್ದಾಣಕ್ಕೆ ಬಂದಿಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಸ್ವಾಗತಿಸಲು ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರ ದಂಡೇ ಆಗಮಿಸಿತ್ತು.

ಈ ನಡುವೆ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಸಮಾವೇಶ ಮಾಡುವ ಮೂಲಕ ಜನರಿಗೆ ತಲುಪಿಸಬೇಕೆಂಬ ಕಾಂಗ್ರೆಸ್ ನಾಯಕರ ಉದ್ದೇಶಕ್ಕೆ ರಾಹುಲ್ ಅನಾರೋಗ್ಯ ಅಡ್ಡಿಯಾಗಿದೆ. ಹಾಗಿದ್ದರೂ ಪಕ್ಷದ ಸಾಮರ್ಥ್ಯ ಪ್ರದರ್ಶನಕ್ಕೆ ಗಡಿಭಾಗದ ಜಿಲ್ಲೆ ಸಂಪೂರ್ಣ ಸಜ್ಜಾಗಿದೆ.

ಇದನ್ನೂ ಓದಿ…  ಅಮಿತ್ ಷಾ ಸ್ವಾಗತಕ್ಕೆ ಓಡೋಡಿ ಬಂದ ಬಿಜೆಪಿ ನಾಯಕರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ