ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ರಾಹುಲ್ ಗಾಂಧಿ ಯಾತ್ರೆ– ಶೋಭಾ ವ್ಯಂಗ್ಯ

ಶನಿವಾರ, 10 ಫೆಬ್ರವರಿ 2018 (17:56 IST)
ಜೈಲಿಗೆ ಹೋಗಿ ಬಂದವರ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯಾತ್ರೆ ಆರಂಭಿಸಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.
 
ಉಡುಪಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದವರನ್ನು ಜೈಲಿಗೆ ಹೋಗಿ ಬಂದವರು ಎಂದು ಟೀಕಿಸುತ್ತಿದ್ದರು. ಆದರೆ ಅದೇ ಕ್ಷೇತ್ರವನ್ನೇ ರಾಹುಲ್ ಗಾಂಧಿ ಅವರ ಸಮಾವೇಶಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
 
ರಾಹುಲ್ ಗಾಂಧಿ ಅವರು ಎಷ್ಟು ಬಾರಿ ರಾಜ್ಯಕ್ಕೆ ಬಂದರೂ ದೇವಸ್ಥಾನಗಳಿಗೆ ಹೋಗಿರಲಿಲ್ಲ. ಆದರೆ ವಿಧಾನಸಭಾ ಚುನಾವಣೆ ಸಮೀಪಿಸಿರುವುದರಿಂದ ದೇವಾಲಯಗಳಿಗೆ ಹೋಗುತ್ತಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ