ಜವಾರಿ ಕೋಳಿ ತಿಂದು ದೇವರ ದರ್ಶನ ಪಡೆದ ರಾಹುಲ್ ಗಾಂಧಿ- ಯಡಿಯೂರಪ್ಪ ಟ್ವಿಟ್

ಮಂಗಳವಾರ, 13 ಫೆಬ್ರವರಿ 2018 (10:44 IST)

ಮೀನು ತಿಂದು ಧರ್ಮಸ್ಥಳಕ್ಕೆ ಹೋಗುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೆಡೆಯಾದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದೆಡೆ ಜವಾರಿ ಕೋಳಿ ತಿಂದು ನರಸಿಂಹಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ವಿರುದ್ಧ ಟ್ವಿಟ್ ಸರಣಿ ಮುಂದುವರೆಸಿರುವ ಬಿ.ಎಸ್.ಯಡಿಯೂರಪ್ಪ ಅವರು, ರಾಜ್ಯದಲ್ಲಿ ಜನಾಶೀರ್ವಾದ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಟ್ವಿಟ್ ಮಾಡುವ ಮೂಲಕ ಟೆಂಪಲ್ ರನ್ ಕಾರ್ಯಕ್ರಮವನ್ನು ಖಂಡಿಸಿದ್ದಾರೆ.

ಪ್ರತಿಬಾರಿಯೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಕಾಂಗ್ರೆಸ್ ಏಕೆ ಧಕ್ಕೆ ತರುತ್ತಿದೆ ಎಂದು ಪ್ರಶ್ನಿಸಿರುವ ಅವರು, ಎಲ್ಲರನ್ನು ಸಮಾನವಾಗಿ ಕಾಣುವುದು ಸಮಾಜವಾದವಾದರೆ, ನಿಮ್ಮದು ಮಜಾವಾದ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ