ರಾಹುಲ್ ಗಾಂಧಿಯ ಮೊದಲ ಭೇಟಿ ಪಣಕನಹಳ್ಳಿಗೆ

ಶುಕ್ರವಾರ, 9 ಅಕ್ಟೋಬರ್ 2015 (14:36 IST)
ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಸಾಕಷ್ಟು ರೈತರು ಆತ್ಮಹತ್ಯೆ ಮಾಡುಕೊಂಡಿರುವ ಹಿನ್ನೆಲೆಯಲ್ಲಿ ಸಾಂತ್ವನ ಹೇಳಲು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಮಧ್ಯಾಹ್ನ 1.30ರ ವೇಳೆಗೆ ತಾಲೂಕಿನ ಕಣಕನಹಳ್ಳಿಗೆ ಭೇಟಿ ನೀಡಿದ್ದಾರೆ. 
 
ಗ್ರಾಮದ ನಿವಾಸಿಯಾಗಿದ್ದ ಮಹೇಶ್ ಎಂಬ ರೈತ ಕಳೆದ ಮೂರು ತಿಂಗಳ ಹಿಂದೆ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಇಂದು ಮೃತ ರೈತರನ ಮನೆಗೆ ಭೇಟಿ ನೀಡಿದ ರಾಹುಲ್, ಮೃತ ಮಹೇಶ್ ಅವರ ತಾಯಿ ಹಾಗೂ ಸಹೋದರಿಯರಿಗೆ ಸಾಂತ್ವನ ಹೇಳಿದರು. 
 
ಇನ್ನು ಮಂಡ್ಯ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 60 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ರೈತರ ಹಲವು ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದು, ಬಳಿಕ ಹಾವೇರಿ ಜಿಲ್ಲೆಯತ್ತ ಪ್ರಯಾಣ ಬೆಳೆಸಲಿದ್ದಾರೆ ಎಂಬುದಾಗಿ ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. 

ವೆಬ್ದುನಿಯಾವನ್ನು ಓದಿ