ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ರಾಜ್ಯಾದ್ಯಂತ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಕಳಸಾ ಬಂಡೂರಿ, ಮಹದಾಯಿ ಯೋಜನೆಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ವಾಟಾಳ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತದೆ.
ರೈತರು ಮತ್ತು ಕನ್ನಡಪರ ಸಂಘಟನೆಗಳು ಇದರಲ್ಲಿ ಭಾಗವಹಿಸಲಿವೆ. ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಧಾರವಾಡ, ಮೈಸೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ರೈಲು ತಡೆ ಚಳವಳಿ ನಡೆಸಲಾಗುತ್ತದೆ.