ಇನ್ನೂ ಮುಗಿದಿಲ್ಲ ಮಳೆಯ ಅಬ್ಬರ
ಚಾಮರಾಜನಗರದಲ್ಲಿ ಪ್ರವಾಹ ಭೀತಿಯಿದ್ದು, ಶಾಲೆಯೊಳಗೆ ಸಿಲುಕಿದ್ದ ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ವಿಜಯಪುರದಲ್ಲಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ. ಇಂದೂ ಕೂಡಾ ಮಳೆ ಮುಂದುವರಿಯುವ ನಿರೀಕ್ಷೆಯಿದೆ.