ಮಳೆಯಿಂದಾಗಿ ರಾಮಮ್ಮನ ಕೆರೆ‌ ಕೋಡಿ ಬಿದ್ದು ಮನೆಗಳು ಜಲಾವೃತ

ಶನಿವಾರ, 27 ಆಗಸ್ಟ್ 2022 (18:28 IST)
ರಾತ್ರಿ ಸುರಿದ ಮಳೆಯಿಂದಾಗಿ ರಾಮಮ್ಮನ ಕೆರೆ‌ ಕೋಡಿ ಬಿದ್ದು ಮನೆಗಳು ಜಲಾವೃತವಾಗಿರುವಂತಹ ಘಟನೆ ನಡೆದಿದೆ. ತಿಟ್ಟಮಾರನಹಳ್ಳಿ ಗ್ರಾಮದ ಬಳಿಯ ರಾಮಮ್ಮನ ಕೆರೆ‌ ಕೋಡಿ ಬಿದ್ದು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಚನ್ನಪಟ್ಟಣ ತಾಲೂಕಿನ ಎಲೆಕೆರೆ ಗ್ರಾಮದಲ್ಲೂ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮನೆಗೆ ನೀರು ನುಗ್ಗಿದ್ದರಿಂದ  ಕುಟುಂಬಸ್ಥರು ಪರದಾಡುವಂತ್ತಾಗಿದೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ನೀರು ಹೊರ ಹಾಕಿದರು. ಮನೆಗಳಿಗೆ ಚರಂಡಿ ನೀರು ನುಗ್ಗಿ ಜನರು ಪರದಾಡಿರುವಂತಹ ಘಟನೆ ಬೀಡಿ ಕಾಲೋನಿ, ಆರ್​ಎಂಸಿ ಕಾಲೋನಿಯಲ್ಲಿಯೂ ನಡೆದಿದೆ. 20 ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿ ಅವಾಂತರ ಉಂಟಾಗಿದ್ದು, ಮನೆಗಳಿಗೆ ಚರಂಡಿ ನೀರು ನುಗ್ಗಿ ಕುಟುಂಬಸ್ಥರು ಪರದಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ