ರಾಜ್ಯದಲ್ಲಿ 2 ದಿನ ಮಳೆ ಮುನ್ಸೂಚನೆ

ಭಾನುವಾರ, 23 ಅಕ್ಟೋಬರ್ 2022 (17:12 IST)
ಕರ್ನಾಟಕದಲ್ಲಿ ಮಳೆಯ ಅಬ್ಬರ ಕೊಂಚ ಇಳಿಮುಖವಾಗಿದ್ದರೂ ಇನ್ನೂ ಮಳೆ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಇಂದಿನಿಂದ 2 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕದ ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆಯಾಗಬಹುದು. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗಿರುವುದರಿಂದ ಮಳೆಯ ಅಬ್ಬರವೂ ಹೆಚ್ಚಾಗಿದೆ. ರಾಜ್ಯದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್​​ 24ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕಳೆದ 1 ವಾರದಿಂದ ಭಾರೀ ಮಳೆಯಾಗಿದ್ದರಿಂದ ರಾಜಕಾಲುವೆ, ತಗ್ಗು ಪ್ರದೇಶಕ್ಕೆ ನೀರು ತುಂಬಿಕೊಂಡಿತ್ತು. ಹಾಗಾಗಿ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ