ಮುಂದಿನ ಎರಡು ದಿನ ಬೆಂಗಳೂರಲ್ಲಿ ಛತ್ರಿ ಇಲ್ಲದೆ ಓಡಾಡುವಂತಿಲ್ಲ!

ಸೋಮವಾರ, 28 ಆಗಸ್ಟ್ 2017 (08:28 IST)
ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿಯಲ್ಲಿ ವರುಣ ದೇವನ ಕೃಪಾಕಟಾಕ್ಷ ಜೋರಾಗಿದೆ. ಈ ವರ್ಷಧಾರೆ ಇನ್ನೂ ಎರಡು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

 
ಕರ್ನಾಟಕ, ಒಡಿಶಾ ಸೇರಿದಂತೆ  ದೇಶದ ಹಲೆವೆಡೆ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಹವಾಮಾನದಲ್ಲಿ ವೈಪರೀತ್ಯವಾಗಲಿದೆ ಎಂದು ಹೇಳಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಹಲವೆಡೆ ಮಳೆಯಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದು, ಇನ್ನೂ ಎರಡು ದಿನ ಈ ಸಮಸ್ಯೆ ತಪ್ಪಿದ್ದಲ್ಲ ಎಂಬುದು ಖಾತ್ರಿಯಾಗಿದೆ.

ಇದನ್ನೂ ಓದಿ.. ಅಪರೂಪಕ್ಕೆ ತಪ್ಪು ಮಾಡಿದ ಧೋನಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ