ಮಳೆಯ ರೌದ್ರಾವತಾರ: ಕಂಗಾಲಾದ ಜನರು

ಸೋಮವಾರ, 24 ಜೂನ್ 2019 (15:15 IST)
ಮಳೆಯ ರೌದ್ರಾವತಾರ ಹಾಗೂ ಧಾರಾಕಾರವಾಗಿ ಸುರಿದಿರುವುದಕ್ಕೆ ಜನಜೀವನ ತತ್ತರಗೊಂಡಿದೆ.

ಬೆಳಗಾವಿ ಜಿಲ್ಲೆಯಾದ್ಯಂತ ಹಲವೆಡೆ ವರುಣನ ರೌದ್ರಾವತಾರ ಮುಂದುವರಿದಿದೆ.

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಸುರಿದ ಮಳೆ ಜನರನ್ನು ಹೈರಾಣಾಗಿಸಿದೆ.

ಚಿಕ್ಕೋಡಿ, ಅಥಣಿ, ಹುಕ್ಕೇರಿ, ರಾಯಭಾಗ ತಾಲ್ಲೂಕಿನಲ್ಲಿ ಸುರಿದ ಮಳೆ ಜನಜೀವನ ಅಸ್ತವ್ಯಸ್ತಗೊಳ್ಳಲು ಕಾರಣವಾಗಿದೆ.

ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದರೆ, ತುಂಬಿ ಹರಿದ ಹಳ್ಳ ಕೊಳ್ಳಗಳು ಭಾರೀ ಮಳೆಗೆ ಸಾಕ್ಷಿಯಾಗಿವೆ.

ಯಕ್ಸಂಬಾ ಪಟ್ಟಣದಲ್ಲಿ ನೂರಾರು ಅಡಿ ಕೊಚ್ಚಿ ಹೋಗಿವೆ ಕಾರು, ಮೋಟಾರು ಬೈಕ್ ಗಳು.

ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ. ಅಲ್ಲಲ್ಲಿ ಬಿದ್ದ ಮರಗಳು, ವಿದ್ಯುತ್ ಕಂಬಗಳು ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿವೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ