ಇಂದು ಡಾ.ರಾಜ್ ಹುಟ್ಟುಹಬ್ಬ: ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ
ಬೆಂಗಳೂರು: ಇಂದು ಡಾ.ರಾಜ್ಕುಮಾರ್ ಅವರ 86ನೇ ಹುಟ್ಟುಹಬ್ಬವಾಗಿದ್ದು, ಅಭಿಮಾನಿ ಸಂಘಟನೆಗಳಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧೆಡೆ ಅಭಿಮಾನಿಗಳು ಡಾ.ರಾಜ್ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.
ರಾಜ್ ಹುಟ್ಟುಹಬ್ಬದ ಅಂಗವಾಗಿ ಅನ್ನದಾನ, ರಕ್ತದಾನ ನೇತ್ರದಾನ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಬಿಸಿಲ ಬೇಗೆಯಿಂದ ತಪ್ಪಿಸಲು ಪೆಂಡಾಲ್ ವ್ಯವಸ್ಥೆ ಮಾಡಲಾಗಿದೆ. ಹುಟ್ಟುಹಬ್ಬದ ಅಂಗವಾಗಿ ರಾಜ್ ಸಮಾಧಿಗೆ ಇಂದು ಪುಷ್ಪಾಲಂಕಾರ ಮಾಡಲಾಗಿದೆ.
ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡಿ ನಮನ ಸಲ್ಲಿಸಿದರು. ಚಿತ್ರರಂಗದ ಗಣ್ಯರು ಕೂಡ ರಾಜ್ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು.