ನನ್ನಗೆ ಜೀವ ಬೆದರಿಕೆ ಇದೆ, ಶಾಸಕ ರಾಜು ಕಾಗೆ ಕುಟುಂಬಕ್ಕೆ ಬೇಲ್ ಸಿಗಬಾರದು: ವಿವೇಕ್ ಶೆಟ್ಟಿ

ಸೋಮವಾರ, 16 ಜನವರಿ 2017 (15:25 IST)
ಬಿಜೆಪಿ ಶಾಸಕ ರಾಜು ಕಾಗೆ ಕುಟುಂಬದ ವಿರುದ್ಧ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ಶಾಸಕರ ಕುಟುಂಬಕ್ಕೆ ಜಾಮೀನು ಸಿಗಬಾರದು ಎಂದು ಹಲ್ಲೆಗೊಳಗಾಗಿದ್ದ ಕಾಂಗ್ರೆಸ್ ನಾಯಕ ವಿವೇಕ್ ಶೆಟ್ಟಿ ಹೇಳಿಕೆ ನೀಡಿದ್ದಾನೆ.
 
ಪ್ರಕರಣ ದಾಖಲಾಗಿ 9 ದಿನ ಕಳೆದರು ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ನನ್ನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಆರೋಪಿಗಳಿಗೆ ಜಾಮೀನು ಸಿಕ್ಕರೆ ಮತ್ತೆ ನನಗೆ ತೊಂದರೆ ಕೊಡುತ್ತಾರೆ. ಪೊಲೀಸರು ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
 
ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಹಾಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.
 
ಶಾಸಕ ರಾಜು ಕಾಗೆ ಪುತ್ರಿ ಪ್ರತೀಕ್ಷಾ ಜೊತೆಗೆ 11 ಜನರ ರೌಡಿ ತಂಡ ಏಕಾಏಕಿ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ವಿವೇಕ ಶೆಟ್ಟಿಯನ್ನು ಗ್ರಾಮಸ್ಥರ ಎದುರೇ ರಸ್ತೆಗೆ ಎಳೆತಂದು ಕತ್ತು ಹಿಸುಕಿ ಕೊಲೆ ಮಾಡಲು ಸಹ ಯತ್ನಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ