ರಾಜ್ಯಸಭೆ ಚುನಾವಣೆ: ಕೇಂದ್ರ ಸಚಿನೆ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

ಮಂಗಳವಾರ, 31 ಮೇ 2016 (12:06 IST)
ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ಸಂಸದ ಪ್ರಹ್ಲಾದ್ ಜೋಶಿ ಮತ್ತು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದ್ದಾರೆ. 
 
ಇದೇ ವೇಳೆ ವಿಧಾನ ಪರಿಷತ್ ಚುನಾವಣೆಗೆ ಮಾಜಿ ಸಜಿವ ವಿ.ಸೋಮಣ್ಣ ಅವರು ನಾಮಪತ್ರ ಸಲ್ಲಿಸಿದರು.
 
ಈ ಹಿಂದೆ, ಬಿಜೆಪಿ ಪಕ್ಷದಿಂದ ರಾಜ್ಯಸಭೆ ಚುನಾವಣೆಗೆ ವೆಂಕಯ್ಯ ನಾಯ್ಡು ಅವರ ಹೆಸರು ಅಂತಿಮಗೊಂಡಿತ್ತು. ಆದರೆ, ಅವರು ಕನ್ನಡ ನಾಡಿಗೆ ಯಾವ ಕೊಡುಗೆಯನ್ನು ನೀಡಿಲ್ಲವೆಂದು ಕನ್ನಡ ಸಂಘಟನೆಗಳು ತೀವ್ರವಾಗಿ ವಿರೋಧಿಸಿದ ಕಾರಣ ಆಂಧ್ರಪ್ರದೇಶ ಮೂಲದ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸಲಾಗಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ