ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ಸಂಸದ ಪ್ರಹ್ಲಾದ್ ಜೋಶಿ ಮತ್ತು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದ್ದಾರೆ.
ಈ ಹಿಂದೆ, ಬಿಜೆಪಿ ಪಕ್ಷದಿಂದ ರಾಜ್ಯಸಭೆ ಚುನಾವಣೆಗೆ ವೆಂಕಯ್ಯ ನಾಯ್ಡು ಅವರ ಹೆಸರು ಅಂತಿಮಗೊಂಡಿತ್ತು. ಆದರೆ, ಅವರು ಕನ್ನಡ ನಾಡಿಗೆ ಯಾವ ಕೊಡುಗೆಯನ್ನು ನೀಡಿಲ್ಲವೆಂದು ಕನ್ನಡ ಸಂಘಟನೆಗಳು ತೀವ್ರವಾಗಿ ವಿರೋಧಿಸಿದ ಕಾರಣ ಆಂಧ್ರಪ್ರದೇಶ ಮೂಲದ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸಲಾಗಿದೆ.