ಕಾಂಗ್ರೆಸ್ ಪಕ್ಷದಿಂದ ಡಾ.ಎಲ್.ಹನುಮಂತಯ್ಯ, ಡಾ.ಸಯೀದ್ ನಾಸೀರ್ ಹುಸೈನ್ ಮತ್ತು ಜಿ.ಸಿ.ಚಂದ್ರಶೇಖರ್ ಜಯಗಳಿಸಿದ್ದರೆ ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್ ವಿಜಯ ಪತಾಕೆ ಹಾರಿಸಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿದ್ದ ಬಿ.ಎಂ.ಫಾರೂಕ್ ಸೋಲನುಭವಿಸಿ ಬಂದ ದಾರಿಗೆ ಸುಂಕವಿಲ್ಲವೆನ್ನುವಂತೆ ಮರಳಿದ್ದಾರೆ.
ಒಟ್ಟು 188 ಮತಗಳು ಚಲಾವಣೆಯಾಗಿದ್ದು ನಾಲ್ಕು ಮತಗಳು ತಿರಸ್ಕ್ರತಗೊಂಡಿವೆ. ಕಾಂಗ್ರೆಸ್ ಪಕ್ಷದ ಡಾ.ಎಲ್.ಹನುಮಂತಯ್ಯ 44 ಮತಗಳನ್ನು ಪಡೆದು ಜಯಶಾಲಿಯಾಗಿದ್ದರೆ, 42 ಮತಗಳನ್ನು ಪಡೆದು ನಾಸೀರ್ ಹುಸೈನ್ ಜಯಗಳಿಸಿದ್ದಾರೆ. ಮತ್ತೊಬ್ಬ ಅಭ್ಯರ್ಥಿ ಜೆ.ಸಿ.ಚಂದ್ರಶೇಖರ್ 46 ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಗರಂ
ವಿಧಾನಸೌಧದಲ್ಲಿ ನಡೆಯುತ್ತಿರುವ ರಾಜ್ಯ ಸಭೆ ಮತದಾನದ ಸಂದರ್ಭ ಚುನಾವಣಾಧಿಕಾರಿಗಳು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ನಾಯಕರು ಗದ್ದಲವೆಬ್ಬಿಸಿದ್ದಾರೆ.