ಜಾಲತಾಣದಲ್ಲಿ ಅಂಬೇಡ್ಕರ್ ಗೆ ಅವಮಾನ: ರಾಮಸೇನಾ ಕಾರ್ಯಕರ್ತನಿಗೆ ಧರ್ಮದೇಟು

ಶುಕ್ರವಾರ, 13 ಜುಲೈ 2018 (15:17 IST)
ಸಾಮಾಜಿಕ ಜಾಲ ತಾಣದಲ್ಲಿ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರಗೆ ಅವಮಾನ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಶ್ರೀ ರಾಮಸೇನಾ ಕಾರ್ಯಕರ್ತನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ನಡೆದಿದೆ.  

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಫೇಸ್ ಬುಕ್ ದಲ್ಲಿ ಬಿ.ಆರ್. ಅಂಬೇಡ್ಕರರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಶ್ರೀ ರಾಮ ಸೇನಾ ಕಾರ್ಯಕರ್ತನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಂಕೇಶ್ವರ ಪಟ್ಟಣದ ರಮೇಶ ಅಕ್ಕಿವಾಟೆ ಎಂಬ ಯುವಕನಿಂದ ಈ ಕೃತ್ಯ ನಡೆದಿತ್ತು.

ರಮೇಶ ಅಕ್ಕಿವಾಟೆಯನ್ನ ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಪೋಸ್ಟ್ ಶೇರ್ ಮಾಡಿದ ಇಬ್ಬರು ಶ್ರೀ ರಾಮ ಸೇನಾ ಕಾರ್ಯಕರ್ತರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ