ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್
ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಟೀಂ ಎಂದು ಯತ್ನಾಳ್ ಮತ್ತೊಮ್ಮೆ ಆರೋಪಿಸಿದ್ದಾರೆ. ಈ ಹಿಂದೆಯೂ ಒಮ್ಮೆ ವಿಜಯೇಂದ್ರ ಬಗ್ಗೆ ಯತ್ನಾಳ್ ಇಂತಹದ್ದೇ ಗಂಭೀರ ಆರೋಪ ಮಾಡಿದ್ದರು.
ಯಡಿಯೂರಪ್ಪ ತಮ್ಮ ಮಗನನ್ನು ಅಧ್ಯಕ್ಷ ಮಾಡಿಸುವ ಸಲುವಾಗಿ ನನ್ನನ್ನು ಉಚ್ಚಾಟನೆ ಮಾಡಿಸಿದರು. ಯಡಿಯೂರಪ್ಪ ಮತ್ತು ವಿಜಯೇಂದ್ರ ಮೇಲೆ ಹಲವು ಕೇಸ್ ಇದೆ. ವಿಜಯೇಂದ್ರ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬಿಜೆಪಿಯಲ್ಲಿ ವಿಜಯೇಂದ್ರ ವಿರುದ್ಧ ಈಗ ಟೀಂ ದೊಡ್ಡದಾಗಿದೆ. ಅತೃಪ್ತರು ಮತ್ತೆ ಸಭೆ ಸೇರಲಿದ್ದೇವೆ. ತಟಸ್ಥರೂ ವಿಜಯೇಂದ್ರ ವಿರುದ್ಧ ಇದ್ದಾರೆ. ಹೀಗಾಗಿ ಅವರು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಯತ್ನಾಳ್ ಹೇಳಿದ್ದಾರೆ.