ಬಿಜೆಪಿ ಔತಣಕೂಟದಲ್ಲಿ ರಮೇಶ್ ಜಾರಕಿಹೊಳಿ ಭಾಗಿ. ಈ ಬಗ್ಗೆ ಆರ್ ಅಶೋಕ್ ಹೇಳಿದ್ದೇನು?

ಗುರುವಾರ, 20 ಡಿಸೆಂಬರ್ 2018 (12:40 IST)
ಬೆಳಗಾವಿ : ಬಿಜೆಪಿ ಔತಣಕೂಟದಲ್ಲಿ ರಮೇಶ್ ಜಾರಕಿಹೊಳಿ ಪಾಲ್ಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಡಿಸಿಎಂ ಆರ್ ಅಶೋಕ್ ಅವರು ಬೆಳಗಾವಿಯಲ್ಲಿರುವ ಕಾರಣ ಎಲ್ಲರೂ ಔತಣಕೂಟಕ್ಕೆ ಬಂದಿದ್ದಾರೆ ಎಂದು ತಿಳಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು,‘ರಮೇಶ್ ಮತ್ತು ಡಿಕೆಶಿ ನಡುವಿನ ಸಂಬಂಧ ಎಲ್ಲರಿಗೂ ಗೊತ್ತು. ಇಬ್ಬರ ನಡುವೆ ಎಣ್ಣೆ ಸೀಗೆಕಾಯಿ ಸಂಬಂಧ ಅಂತಾ ಎಲ್ಲರಿಗೂ ಗೊತ್ತು, ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ 2 ಭಾಗ ಮಾಡಿದ್ದಾರೆ. ಡಿಕೆಶಿ ಔತಣಕೂಟಕ್ಕೆ ಜಾರಕಿಹೊಳಿ ಹೋಗಲು ಇಷ್ಟವಿರಲಿಲ್ಲ. ರಮೇಶ್ ಜಾರಕಿಕೊಳಿ ತೀರ್ಮಾನದ ಬಗ್ಗೆ ನಮಗೆ ಗೊತ್ತಿಲ್ಲ. ಪ್ರೀತಿ ವಿಶ್ವಾಸದಿಂದ ಬಿಜೆಪಿ ಔತಣಕೂಟಕ್ಕೆ ಬಂದಿರಬಹುದು ಎಂದು ಹೇಳಿದ್ದಾರೆ.


‘ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈಗಾಗಲೇ ಒಬ್ಬ ಸಿಎಂ ಇರುವಾಗ ಸಿದ್ದರಾಮಯ್ಯ ಹೀಗೆ ಹೇಳಿದ್ದಾರೆ. ಕುಮಾರಸ್ವಾಮಿಗೆ ಕಾಂಗ್ರೆಸ್ ಶೀಘ್ರದಲ್ಲಿ ತಲಾಖ್ ಕೊಡಲಿದೆ. ಸೋಡಾ ಚೀಟಿ ಪಡೆಯಲು ಕುಮಾರಸ್ವಾಮಿ ರೆಡಿಯಾಗಲಿ’ ಎಂದು  ಬೆಳಗಾವಿಯಲ್ಲಿ ಮಾಜಿ ಡಿಸಿಎಂ ಅಶೋಕ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ