ಮಂಡ್ಯಕ್ಕೆ ರಮ್ಯಾನಾದ್ರೂ ಬರ್ಲಿ.. ಸೌಮ್ಯನಾದ್ರೂ ಬರ್ಲಿ ನಂಗೇನು ಎಂದ ಅಂಬರೀಷ್

ಗುರುವಾರ, 30 ನವೆಂಬರ್ 2017 (11:23 IST)
ಬೆಂಗಳೂರು: ಮಂಡ್ಯದಲ್ಲಿ ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ನಟಿ, ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾಗೆ ಟಿಕೆಟ್ ನೀಡುತ್ತದೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ನಟ ಅಂಬರೀಷ್ ಯಾರು ಬಂದರೂ ನನಗೇನಿಲ್ಲ ಎಂದಿದ್ದಾರೆ.
 

ಸಿಎಂ ಸಿದ್ದರಾಮಯ್ಯನವರನ್ನು ಅವರ ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮಂಡ್ಯದ ಹಾಲಿ ಶಾಸಕ ಅಂಬರೀಷ್ ರಮ್ಯಾ, ಸೌಮ್ಯಾ, ಸುಮಾ ಯಾರೇ ಬಂದರೂ ಮಂಡ್ಯ ಜನತೆಗೆ ತೊಂದರೆಯಿಲ್ಲ  ಎಂದಿದ್ದಾರೆ.

ಪಕ್ಷ ಟಿಕೆಟ್ ಕೊಟ್ಟರೆ ಮಾತ್ರ ಸ್ಪರ್ಧಿಸುತ್ತೇನೆ ಎಂದಿರುವ ಅಂಬರೀಷ್ ಪ್ರಚಾರಕ್ಕೆ ಹೋಗುವ ಬಗ್ಗೆ ಏನನ್ನೂ ಹೇಳಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ