ಈ ಹಿಂದೆ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಮ್ಯಾ ಅವರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಅವರು ಎರಡನೇ ಸ್ಥಾನಕ್ಕೆ ಕುಸಿದಿದ್ದು, ಚುನಾವಣೆಯಲ್ಲಿ ಸೋಲು ಕಾಣುವ ಮೂಲಕ ತೀವ್ರ ಮುಖಭಂಗವನ್ನು ಅನುಭವಿಸಿದ್ದಾರೆ. ರಮ್ಯಾ ಅವರ ಸೋಲಿಗೆ ಮಂಡ್ಯ ಕಾಂಗ್ರೆಸ್ ಬಣ ರಾಜಕೀಯವೇ ಕಾರಣ ಎನ್ನಲಾಗುತ್ತಿದೆ. ಮಂಡ್ಯದಲ್ಲಿ ಅಂಬರೀಶ್ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಅವರ ಬೆಂಬಲಿಗರ ನಡುವೆ ತೀವ್ರ ಭಿನ್ನಾಭಿಪ್ರಾಯಗಳಿವೆ.
ಈ ಹಿಂದೆ ತಾವು ಸೋತರೂ ಗೆದ್ದರೂ ಮಂಡ್ಯ ಜಿಲ್ಲೆಯಲ್ಲಿಯೇ ವಾಸ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದ ನಟಿ ರಮ್ಯಾ ಅವರು, ಇದೀಗ ತಮ್ಮ ಮನೆಯನ್ನು ಖಾಲಿ ಮಾಡಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ರಮ್ಯಾ ಅವರು ರಾಜಕೀಯ ತೊರೆಯುವ ನಿರ್ಧಾರದಿಂದಾಗಿ ಮಂಡ್ಯ ಜಿಲ್ಲೆಯನ್ನು ತೊರೆದಿರಬಹುದು ಎಂದು ಊಹಿಸಲಾಗುತ್ತಿದೆ.