BJP ‘ಸುಮಾ’ಸ್ತ್ರಕ್ಕೆ ಕಾಂಗ್ರೆಸ್​​​ನಿಂದ ರಮ್ಯಾಸ್ತ್ರ

ಸೋಮವಾರ, 24 ಏಪ್ರಿಲ್ 2023 (20:03 IST)
ಮಂಡ್ಯ ಸಂಸದೆ ಸುಮಲತಾ ಅಂಬರೀಶ್​​ ಬಿಜೆಪಿ ಪರ ಪ್ರಚಾರ ನಡೆಸುತ್ತಿರುವುದಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಪರ ಮಾಜಿ ಸಂಸದೆ ರಮ್ಯಾ ಕ್ಯಾಂಪೇನ್ ನಡೆಲಿದ್ದಾರೆ. ಈ ಮೂಲಕ ಬಿಜೆಪಿ ಪರ ನಿಂತ ಸುಮಲತಾಗೆ ಕಾಂಗ್ರೆಸ್​​​ನಿಂದ‌ ಪ್ರತ್ಯಾಸ್ತ್ರ ಪ್ರಯೋಗ ಮಾಡಲಾಗುತ್ತಿದೆ. ಮುಂದಿನ ವಾರ ಮಂಡ್ಯ ಅಖಾಡಕ್ಕೆ ಸ್ಯಾಂಡಲ್ ವುಡ್ ಕ್ವೀನ್ ಎಂಟ್ರಿ ಕೊಡಲಿದ್ದಾರೆ. ರೋಡ್ ಶೋ, ಪ್ರಚಾರ‌ ಸಭೆ, ಕಾರ್ನರ್ ಮೀಟಿಂಗ್​​​ನಲ್ಲಿ ರಮ್ಯಾ ಭಾಗಿಯಾಗಿದ್ದಾರೆ. ರಮ್ಯಾ ಮೂಲಕ JDS ಹಾಗೂ BJPಗೆ ಮಾಸ್ಟರ್ ಸ್ಟ್ರೋಕ್ ಕೊಡಿಸಲು ಕಾಂಗ್ರೆಸ್​​ನಿಂದ ಚಿಂತನೆ ನಡೆದಿದೆ. ಈ ಹಿಂದೆ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ನಟಿ ರಮ್ಯಾ ಸಂಸದರಾಗಿದ್ದರು. ಬಳಿಕ ಅಂತರ ಕಾಯ್ದುಕೊಂಡಿದ್ದ ರಮ್ಯಾ ಹಲವು ವರ್ಷಗಳ ನಂತರ ಮಂಡ್ಯ ರಾಜಕಾರಣಕ್ಕೆ ರೀ ಎಂಟ್ರಿ ಕೊಡಲು ತಯಾರಿ ನಡೆಸಿದ್ದಾರೆ. ರಮ್ಯಾ ಪ್ರಚಾರಕ್ಕೆ ಬರುವ ಬಗ್ಗೆ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರವಿಕುಮಾರ್ ಮಾಹಿತಿ‌ ನೀಡಿದ್ದಾರೆ. ಮಂಡ್ಯ ಪ್ರಚಾರಕ್ಕೆ ಬರುವಂತೆ ಕೇಳಿಕೊಂಡಿದ್ದೇವೆ. ಮೇ 1, 2 ರಂದು ಪ್ರಚಾರಕ್ಕೆ ಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ