ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ ಯತ್ನ: ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ಶನಿವಾರ, 29 ಏಪ್ರಿಲ್ 2017 (09:28 IST)
ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನೊಬ್ಬ ಗ್ರಾಮಸ್ಥರಿಂದ ಒದೆ ತಿಂದ ಘಟನೆ ಗದಗ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ನಡೆದಿದೆ.

20 ವರ್ಷದ ಕಾಮುಕ ಮಂಜುನಾಥ ಇಲಿಗಾರ ಎಂಬಾತನನ್ನ ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಹಿಳೆಯರು ಬಹಿರ್ದೆಸೆಗೆ ತೆರಳುತ್ತಿದ್ದದ್ದನ್ನೇ ಕಾದು ಕುಳಿತು ನೋಡುತ್ತಿದ್ದ ಈತ ನಿನ್ನೆ ಏಕಾಏಕಿ ಮಹಿಳೆ ಮೇಲರಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಚೀರುತ್ತಾ ಓಡಿಬಂದು ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾಳೆ.

ಕಾಮುಕ ಮಂಜುನಾಥನನ್ನ ಹಿಡಿದ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಸಂದರ್ಭ ಸ್ಥಳಕ್ಕೆ ಭೇಟಿ ನೀಡಿದ ಮುಳಗುಂದ ಪೊಲೀಸರು ಕಾಮುಕನನ್ನ ಕರೆದೊಯ್ದಿದ್ದಾರೆ. ಹಳ್ಳಿಗಳಲ್ಲಿ ಹಲವೆಡೆ ಈಗಲೂ ಶೌಚಾಲಯದ ವ್ಯವಸ್ಥೆ ಇಲ್ಲದಿರುವುದರಿಂದ ಮಹಿಳೆಯರು ಬಯಲು ಬಹಿರ್ದೆಸೆಗೆ ತೆರಳುತ್ತಿರುವುದರಿಂದ ಇಂತಹ ಕಾಮುಕರಿಗೆ ತುತ್ತಾಗುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ