ಥಳಿತಕ್ಕೊಳಗಾದ ಯುಕನನ್ನು ಇದೇ ಗ್ರಾಮದ ನಿವಾಸಿ ಸತೀಶ್(19) ಎಂದು ಹೇಳಲಾಗಿದ್ದು, ಈತನೇ ಧರ್ಮದೇಟಿಗೆ ಗುರಿಯಾದ ಆರೋಪಿಯಾಗಿದ್ದಾನೆ. ನಿರುದ್ಯೋಗಿಯಾಗಿದ್ದು, ಆಗಾಗ ಕೂಲಿ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಪ್ರಕರಣದ ಹಿನ್ನೆಲೆ: ಗ್ರಾಮದಲ್ಲಿನ ಸ್ಟುಡಿಯೋವೊಂದರಲ್ಲಿ ಯುವತಿಯೋರ್ವಳು ಕೆಲಸ ನಿರ್ವಹಿಸುತ್ತಿದ್ದಳು. ಈ ವೇಳೆ ಆಕೆಯ ಬಳಿ ಸುಳಿದ ಆರೋಪಿ, ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರಕ್ಕೆ ಕೈ ಹಾಕಿದ್ದಾನೆ. ಅಲ್ಲದೆ ಅತ್ಯಾಚಾರಕ್ಕೂ ಯತ್ನಿಸಿದ್ದಾನೆ. ಪರಿಣಾಮ ಆಕೆ ಜೊರಾಗಿ ಕಿರುಚಿಕೊಂಡಿದ್ದಾಳೆ. ಬಳಿಕ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಆತನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಮನ ಬಂದಂತೆ ಥಳಿಸಿದ್ದಾರೆ.