4 ದಿನಗಳ ಹಿಂದಷ್ಟೇ ನಿಶ್ಚಿತಾರ್ಥವಾದ ಯುವತಿಯ ರೇಪ್ & ಮರ್ಡರ್!

ಮಂಗಳವಾರ, 12 ಸೆಪ್ಟಂಬರ್ 2023 (07:55 IST)
ಯಾದಗಿರಿ : ಯುವತಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿ ತಾಲೂಕಿನ ಕಂಚಗಾರಹಳ್ಳಿ ಕ್ರಾಸ್ ಬಳಿ ನಡೆದಿದೆ.

ಸವಿತಾ ರಾಠೋಡ್ (35) ಕೊಲೆಯಾದ ಮೃತ ದುರ್ದೈವಿ. ಯಾದಗಿರಿ ತಾಲೂಕಿನ ಮುದ್ನಾಳ್ ತಾಂಡದ ನಿವಾಸಿಯಾಗಿರುವ ಈಕೆಯ ಯುವತಿಯ ಕುತ್ತಿಗೆ ಹಾಗೂ ಕಿವಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಹೆತ್ತವರು ಇಲ್ಲದ ಕಾರಣ ವಿಕಲಚೇತನ ಸಹೋದರನ ಜೊತೆ ವಾಸವಾಗಿದ್ದ ಸವಿತಾ, ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಅಂತೆಯೇ ಎಂದಿನಂತೆ ಶನಿವಾರ ಕೂಡ ತನ್ನ ಜಮೀನಿಗೆ ಕೆಲಸ ಮಾಡಲು ಹೋದಾಗ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ.

ಚಾಕುವಿನಿಂದ ಇರಿದು ಬಿಸಾಕಿದ್ದ ಸವಿತಾಳನ್ನ ಗ್ರಾಮಸ್ಥರು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇಂದು ನಸುಕಿನ ಜಾವ ಚಿಕಿತ್ಸೆ ಫಲಿಸದೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ