ಇಂದಿರಾ ನಗರದ ಕೆಂಬ್ರಿಡ್ಜ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 6 ವರ್ಷದ ಬಾಲಕಿಯ ಮೇಲೆ ದೈಹಿಕ ಶಿಕ್ಷಕ ಜೈ ಶಂಕರ್(37) ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಮೂಲತಃ ತಮಿಳುನಾಡು ಮೂಲದವನಾದ ಆರೋಪಿ ಕಳೆದ 7 ವರ್ಷಗಳಿಂದ ಇದೇ ಶಾಲೆಯಲ್ಲಿ ಹಿಂದಿ ಮತ್ತು ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಅಕ್ಟೋಬರ್ 28 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಇಂದು ಶಾಲೆಗೆ ರಜೆ ಘೋಷಿಸಲಾಗಿದೆ.
ಶಾಲೆಗೆ ಬಂಗಳೂರು ದಕ್ಷಿಣ ವಲಯ ಬಿಇಒ ರಮೇಶ್ ಭೇಟಿ ನೀಡಿದ್ದು, ಶಾಲೆಯ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಶಾಲಾ ಆಡಳಿತ ಮಂಡಳಿ ಜತೆ ಚರ್ಚೆ ನಡೆಸಿದ್ದಾರೆ.