ಬಾಲಕನ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಶನಿವಾರ, 16 ಅಕ್ಟೋಬರ್ 2021 (14:58 IST)
ಪುತ್ತೂರು : ಕಬಕ ಗ್ರಾಮದ ಮುರ ರೈಲ್ವೇ ಕ್ರಾಸ್ ಬಳಿ 20 ವರ್ಷದ ಎಂಡೋಪೀಡಿತ ಯುವಕನಿಗೆ ಕಬ್ಬು ಕೊಡಿಸುವುದಾಗಿ ಹೇಳಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಶುಕ್ರವಾರ ಸಂಜೆ ಯುವಕ ಸಂಜೆ 6.00 ಗಂಟೆಗೆ ವಾಕಿಂಗ್ ಗೆಂದು ಮನೆಯಿಂದ ಹೋಗಿದ್ದು ಮನೆಗೆ ಮರಳಿದ ಸಂದರ್ಭದಲ್ಲಿ ಆತನ ವಸ್ತ್ರ ಮಣ್ಣಿನಿಂದ ಕೂಡಿದನ್ನು ಕಂಡು ಮನೆ ಮಂದಿ ವಿಚಾರಿಸಿದಾಗ ಅತ್ಯಾಚಾರದ ಯತ್ನ ಬೆಳಕಿಗೆ ಬಂದಿದೆ.
ಆರೋಪಿ ಮಹಮ್ಮದ್ ಹನೀಫ್ ಕಬ್ಬು ನೀಡುವ ನೆಪದಲ್ಲಿ ಮುರ ರೈಲ್ವೇ ಕ್ರಾಸ್ ಹತ್ತಿರ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿದ್ದಾನೆ. ಯುವಕ ನಿರಾಕರಿಸಿದ ಸಂದರ್ಭದಲ್ಲಿ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾನೆ. ಈ ವಿಚಾರವನ್ನು ಮನೆಯವರಿಗೆ ತಿಳಿಸಿದರೆ ಕೊಲ ಮಾಡುವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಯುವಕನ ತಂದೆ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ