ಬಾಲಕಿ ಮೇಲೆ ಅತ್ಯಾಚಾರ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

ಶನಿವಾರ, 1 ನವೆಂಬರ್ 2014 (13:09 IST)
ಕೇಂಬ್ರಿಡ್ಜ್ ಶಾಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆಯ ವಿರುದ್ಧ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ ನಡೆಸಿತು. ಶಾಲಾ ಆಡಳಿತ ಮಂಡಳಿ ಸದಸ್ಯರನ್ನು ಬಂಧಿಸುವಂತೆ ಅದು ಒತ್ತಾಯಿಸಿತು. ಶಾಲಾ ಆಡಳಿತ ಮಂಡಳಿಯ ಬೇಜಾವಾಬ್ದಾರಿ ವಿರುದ್ಧ ಸಾಕಷ್ಟು ಆಕ್ರೋಶವನ್ನು ಅದು ವ್ಯಕ್ತಪಡಿಸಿದೆ.

ಬಿಜೆಪಿ ಮಾಜಿ ಶಾಸಕ ಜ್ಞಾನೇಂದ್ರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಕೇಂಬ್ರಿಡ್ಜ್ ಶಾಲೆ ಎದುರು ಕಾರ್ಯಕರ್ತರು ನೆರೆದು ಧಿಕ್ಕಾರದ ಘೋಷಣೆಗಳನ್ನು ಕೂಗಿದರು.  ಈ ನಡುವೆ ಆರೋಪಿ ಜೈಶಂಕರ್‌ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಕಳೆದ ಅಕ್ಟೋಬರ್ 28ರಂದು ದೈಹಿಕ ಶಿಕ್ಷಕ ಜೈಶಂಕರ್ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬಳಿಕ ಪೊಲೀಸರು ಅವನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ