ಯುವತಿ ಮೇಲೆ ಅತ್ಯಾಚಾರವೆಸಗಿ ಕತ್ತು ಸೀಳಿ ಕೊಲೆ

ಶುಕ್ರವಾರ, 2 ಅಕ್ಟೋಬರ್ 2015 (11:36 IST)
ಕೆಲಸಕ್ಕೆಂದು ತೆರಳಿದ್ದ ಯುವತಿಯ ಮೇಲೆ ಅತ್ಯಾಚಾರವೆಸಗಿ ಕತ್ತು ಸೀಳಿ ಕೊಲೆಗೈದಿರುವ ಧಾರುಣ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಗೋಳಿಯಂಗಡಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. 
 
ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಯುವತಿಯನ್ನು ಸುಮಿತ್ರಾ ನಾಯಕ್(20) ಎಂದು ಹೇಳಲಾಗಿದ್ದು, ಗೋಳಿಯಂಗಡಿ ಗ್ರಾಮದ ನಿವಾಸಿಯೇ ಆಗಿದ್ದಾಳೆ. ನಿನ್ನೆ ಕೆಲಸಕ್ಕೆಂದು ತೆರಳಿದ್ದ ಯುವತಿ ರಾತ್ರಿಯಾದರೂ ಕೂಡ ಮನೆಗೆ ಆಗಮಿಸಿರಲಿಲ್ಲ. ಇದರಿಂದ ವ್ಯಥೆಗೊಳಗಾಗಿದ್ದ ಪೋಷಕರು ಗ್ರಾಮದೆಲ್ಲೆಡೆ ಹುಡಾಕಾಟ ನಡೆಸಿದ್ದಾರೆ. ಈ ವೇಳೆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.
 
ಇನ್ನು ವಿಷಯ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲಿಸುತ್ತಿದ್ದಾರೆ. ಅಲ್ಲದೆ ಅತ್ಯಾಚಾರವೆಸಗಿ ಬಳಿಕ ಹತ್ಯೆಗೈಯ್ಯಲಾಗಿದೆ ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಶಂಕಿತ ಆರೋಪಿಯೋರ್ವನನ್ನು ಬಂಧಿಸಿರುವ ಶಂಕರನಾರಾಯಣ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ