ಅತ್ಯಾಚಾರಿಗಳಿಗೆ ಯಾರ ಭಯವು ಇಲ್ಲದಂತಾಗಿದೆ: ಶೋಭಾ ಕರಂದ್ಲಾಜೆ

ಶನಿವಾರ, 22 ನವೆಂಬರ್ 2014 (16:06 IST)
ರಾಜ್ಯದಲ್ಲಿ ಪ್ರತಿನಿತ್ಯ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು ಆರೋಪಿಗಳಿಗೆ ಪೊಲೀಸರ, ಸರಕಾರದ ಭಯವೇ ಇಲ್ಲದಂತಾಗಿದೆ ಎಂದು ಬಿಜೆಪಿ ನಾಯಕಿ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತೀರ್ಥಹಳ್ಳಿಯ ನಂದಿತಾ ಮೃತಪಟ್ಟು ಒಂದು ತಿಂಗಳಾದರೂ ಸಿಐಡಿ ಸರಕಾರಕ್ಕೆ ವರದಿ ಸಲ್ಲಿಸುವಲ್ಲಿ ವಿಫಲವಾಗಿದೆ. ಹೊಸನಗರದಲ್ಲಿ ಮತ್ತೊಂದು ಅತ್ಯಾಚಾರದ ವರದಿಯಾಗಿದೆ. ಇದೇ ರೀತಿ ಮುಂದುವರಿದಲ್ಲಿ ಸರಕಾರ ಜನತೆಯ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.  
 
ಶಾಲೆಗಳಲ್ಲಿ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ಸರಕಾರ ಜನತೆಯಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎನ್ನುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಉಡುಪಿ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು

ವೆಬ್ದುನಿಯಾವನ್ನು ಓದಿ