ರೇಷನ್ ಇನ್ಮುಂದೆ ಬಯೋಮೆಟ್ರಿಕ್ ಬದಲು ಮೊಬೈಲ್ ಓ.ಟಿ.ಪಿ ಮೂಲಕ ಸಿಗುತ್ತೆ
ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಬಯೋ ಮೆಟ್ರಿಕ್ ಕ್ಯಾನ್ಸಲ್ ಮಾಡಲಾಗಿದೆ.
ಪಡಿತರ ಚೀಟಿದಾರರ ಮೊಬೈಲ್ ಸಂಖ್ಯೆ ಆಧಾರ್ನಲ್ಲಿ ನೋಂದಣಿಯಾಗದೇ ಇದ್ದ ಸಂದರ್ಭದಲ್ಲಿ ಪಡಿತರ ಚೀಟಿದಾರರು ತರುವ ಮೊಬೈಲ್ ಸಂಖ್ಯೆಯನ್ನು ವರ್ತಕರಿಗೆ ನೀಡಬೇಕು. ಆಗ ನ್ಯಾಯಬೆಲೆ ಅಂಗಡಿ ವರ್ತಕರು ಮೋಬೈಲ್ ಸಂಖ್ಯೆ ದೃಢೀಕರಣ ಮಾಡಿಕೊಂಡು ಅದನ್ನು ದತ್ತಾಂಶದಲ್ಲಿ ನಮೂದಿಸಿದಾಗ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ. ರವಾನೆಯಾಗುತ್ತದೆ. ಇದನ್ನು ಬಳಸಿಕೊಂಡು ಪಡಿತರ ವಿತರಿಸಬಹುದು.