ಮೈತ್ರಿ ಸರ್ಕಾರದ ಉಳಿವಿಗಾಗಿ ತಿಮ್ಮಪ್ಪನ ಮೊರೆ ಹೋದ ರೇವಣ್ಣ

ಗುರುವಾರ, 11 ಜುಲೈ 2019 (10:30 IST)
ಬೆಂಗಳೂರು : ಶಾಸಕರ ರಾಜೀನಾಮೆ ಪ್ರಕ್ರಿಯೆಯಿಂದ ಉರುಳಿ ಬೀಳುವ ಹಂತದಲ್ಲಿದ್ದ ಮೈತ್ರಿ ಸರ್ಕಾರವನ್ನ ಉಳಿಸಪ್ಪ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ.




ಕಳೆದ ಆರು ದಿನಗಳಿಂದ ಬರಿಗಾಲಲ್ಲೇ ಓಡಾಡುತ್ತಿರೋ ರೇವಣ್ಣ ಅವರು ಇಂದು ಬೆಳ್ಳಂಬೆಳಗ್ಗೆ ತಿರುಪತಿಯಲ್ಲಿ ವೆಂಕಟೇಶ್ವರ ಸ್ವಾಮಿಯ ದರ್ಶನ ಮಾಡಿ, ಸರ್ಕಾರ ಉಳಿವಿಗಾಗಿ ಬೇಡಿಕೊಂಡಿದ್ದಾರಂತೆ.


ಮಂಗಳವಾರ ಬೆಳಗ್ಗೆಯೇ ಶೃಂಗೇರಿ ದೇವಾಲಯಕ್ಕೆ ಹೋಗಿ ಶಾರದೆಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ ಅವರು ಇಂದು ತಿರುಪತಿಗೆ ತೆರಳಿದ್ದಾರೆಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ