ರವಿ ಡಿ.ಚನ್ನಣ್ಣನವರ್ ವರ್ಗಾವಣೆ ಮಾಡಿ ಆದೇಶ

ಗುರುವಾರ, 27 ಜನವರಿ 2022 (17:22 IST)
ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕ್ರೈಂ ಇನ್ವೆಸ್ಟಿಗೇಷನ್ ವಿಭಾಗ-3ರ ಎಸ್ಪಿಯಾಗಿದ್ದಂತ ರವಿ ಡಿ ಚೆನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿದೆ. ಅವರನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಶೆಡ್ಯೂಲ್ ಟ್ರೈಬ್ ಡೆವೆಲಪ್ಮೆಂಟ್ ಕಾರ್ಪೋರೇಷನ್ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಕ ಮಾಡಲಾಗಿದೆ.
ಕ್ರಿಮಿನಲ್ ಇನ್ವೆಸ್ಟಿಗೇಷನ್ ವಿಭಾಗದ ಎಸ್ ಪಿ ಆಗಿದ್ದಂತ ಡಾ.ಭೀಮಾಶಂಕರ್ ಎಸ್ ಗುಳೇದ್ ಅವರನ್ನು ವರ್ಗಾವಣೆ ಮಾಡಿ, ಬೆಂಗಳೂರು ನಗರ ಈಸ್ಟ್ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
 
ಬೆಂಗಳೂರಿನ ಎಸಿಬಿ ವಿಭಾಗ-2ರ ಎಸ್ಪಿಯಾಗಿದ್ದಂತ ಅಬ್ದುಲ್ ಅಹಮದ್ ಅವರನ್ನು ವರ್ಗಾವಣೆ ಮಾಡಿ, ಕೆ ಎಸ್ ಆರ್ ಟಿ ಸಿಯ ಸೆಕ್ಯೂರಿಟಿ ಮತ್ತು ವಿಜಿಲೆನ್ಸ್ ವಿಭಾಗದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರನ್ನು ವರ್ಗಾವಣೆ ಮಾಡಿ, ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಡೆಪ್ಯೂಟಿ ಡೈರೆಕ್ಟರ್ ಆಗಿ ನೇಮಿಸಲಾಗಿದೆ. ಪೋಸ್ಟಿಂಗ್ ನಿರೀಕ್ಷೆಯಲ್ಲಿದ್ದಂತ ದೆಕ್ಕಾ ಕಿಶೋರ್ ಬಾಬು ಅವರನ್ನು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ