ಕುರಿ ಮಾಂಸದ ಹೆಸರಿನಲ್ಲಿ ನಾಯಿ ಮಾಂಸ ತಿನ್ನಿಸುತ್ತಿರುವ ರಜಾಕ್‌: ಮುತಾಲಿಕ್‌ ಆರೋಪ

Sampriya

ಶನಿವಾರ, 27 ಜುಲೈ 2024 (14:23 IST)
Photo Courtesy X
ಗದಗ: ಕಳೆದ 15 ವರ್ಷಗಳಿಂದ ಅಬ್ದುಲ್ ರಜಾಕ್ ಬೆಂಗಳೂರಿಗರಿಗೆ ಕುರಿ ಮಾಂಸದ ಹೆಸರಿನಲ್ಲಿ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.

ಗದಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್‌, ಹಿಂದೂಗಳೇ ರುಚಿ-ರುಚಿಯಾದ ಹಂದಿ, ನಾಯಿ, ನರಿ, ಬೆಕ್ಕಿನ ಮಾಂಸ ತಿನ್ನಿರಿ ಎಂದು ಹಿಂದೂಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು.

ʼಬೆಂಗಳೂರು ರೈಲ್ವೆ ಸ್ಟೇಷನ್‌ನಲ್ಲಿ 90 ಮಾಂಸದ ಬಾಕ್ಸ್‌ಗಳು ಸಿಕ್ಕಿವೆ. ಅವು ನಾಯಿ ಮಾಂಸ ಇರುವ ಬಾಕ್ಸ್‌ಗಳು. ಕಳೆದ 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ. ಇಷ್ಟೆಲ್ಲ ನಡೆಯುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಕತ್ತೆ ಕಾಯುತ್ತಿದ್ದಾರಾ? ಅಬ್ದುಲ್ ರಜಾಕ್ ದೇಶದ್ರೋಹಿ ಕೆಲಸ ಮಾಡುತ್ತಿದ್ದಾನೆ. ರಾಜಸ್ಥಾನದಿಂದ ನಾಯಿ ಮಾಂಸ ತರಿಸಿ ಮಾರುತ್ತಿದ್ದಾನೆ ಎಂದು ಮುತಾಲಿಕ್‌ ಹೇಳಿದ್ದಾರೆ.

ಅಬ್ದುಲ್ ರಜಾಕ್ ಬೆನ್ನಿಗೆ ಸಚಿವ ಜಮೀರ್ ಅಹ್ಮದ್ ನಿಂತಿದ್ದಾರೆ. ಜಮೀರ್ ಅಹ್ಮದ್ ಉತ್ತರ ಕೊಡಬೇಕು. ಹಿಂದೂಗಳು ಈಗಲಾದರೂ ಎಚ್ಚರಗೊಳ್ಳಬೇಕು. ನಾಯಿ ಮಾಂಸದ ಬಾಕ್ಸ್ ಮೇಲೆ ಮೀನಿನ ಮಾಂಸ ಎಂದು ಬರೆದು ಮೋಸ ಮಾಡುತ್ತಿದ್ದಾರೆ. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ