ಬಿಬಿಎಂಪಿ ಎಲೆಕ್ಷನ್ ನಾವು ಸಿದ್ದ ಬೈರತಿ

ಗುರುವಾರ, 11 ನವೆಂಬರ್ 2021 (14:26 IST)
ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಆಹ್ವಾನಕ್ಕೆ ಸಚಿವ ಬೈರತಿ ಬಸವರಾಜ್ ತಿರುಗೇಟು ನೀಡಿದ್ದಾರೆ. ಬಿಜೆಪಿ‌ ಪಕ್ಷದಲ್ಲಿದ್ದೇವೆ,ಯಾವ ಪಕ್ಷಕ್ಕೂ ಹೋಗಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರು ಆಹ್ವಾನ ಕೊಟ್ಟಿದ್ದಾರೋ ಗೊತ್ತಿಲ್ಲ.ನಮ್ಮ ವರಿಷ್ಟರಿದ್ದಾರೆ ಅವರು ಹೇಳಿದಂತೆ ಮಾಡುತ್ತೇವೆ. ಬಿಬಿಎಂಪಿ ಚುನಾವಣೆ ಯಾವಾಗ ಬಂದ್ರೂ ನಾವು ರೆಡಿಯಿದ್ದೇವೆ. ಬಿಜೆಪಿ ಚುನಾವಣೆ ಎದುರಿಸಲು ರೆಡಿ ಇದೆ. ಕಮಲ ಪಕ್ಷದಿಂದ ಚುನಾವಣೆ ಎದುರಿಸುತ್ತೇವೆ ಎಂದು ಬೈರತಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ