ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಸಿದ್ದು ಕಸರತ್ತು

ಮಂಗಳವಾರ, 18 ಏಪ್ರಿಲ್ 2023 (19:30 IST)
ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಕಸರತ್ತು ನಡೆಸಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿ, ರಾಮಪ್ಪಗೆ ಟಿಕೆಟ್​ ನೀಡುವಂತೆ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆಗೆ ಒತ್ತಡ ಹೇರಿದ್ದಾರೆ. ಈ ಕುರಿತು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪುಲಕೇಶಿನಗರ ಕ್ಷೇತ್ರದಿಂದ ಅಖಂಡ ಶ್ರೀನಿವಾಸಮೂರ್ತಿ ಹಾಗೂ ಹರಿಹರ ಕ್ಷೇತ್ರದಿಂದ ರಾಮಪ್ಪಗೆ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಲೇ ಅಖಂಡ ಶ್ರೀನಿವಾಸ್​​​​ ಜೊತೆ ಮಾತುಕತೆ ನಡೆಸಿರುವ ಸಿದ್ದರಾಮಯ್ಯ ಒಂದು ದಿನ ಕಾದು ನೋಡುವಂತೆ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ