ದೋಸ್ತಿ ನಾಯಕರ ವಿರುದ್ಧ ಕಿಡಿಕಾರಿದ ರೆಬಲ್ ಶಾಸಕರು

ಸೋಮವಾರ, 15 ಜುಲೈ 2019 (10:11 IST)
ಮುಂಬೈ : ಮುಂಬೈನಲ್ಲಿ ಮೈತ್ರಿಸರ್ಕಾರದ ಅತೃಪ್ತ ಶಾಸಕರು ವಾಸ್ತವ್ಯ ಹೂಡಿದ್ದು, ಈ ಹಿನ್ನಲೆಯಲ್ಲಿ ಅವರ  ಮನವೊಲಿಸಲು ಬರುತ್ತಿರುವ ಮೈತ್ರಿ ಸರ್ಕಾರದ ನಾಯಕರ ವಿರುದ್ಧ ಇದೀಗ ರೆಬಲ್ ಶಾಸಕರು ಕಿಡಿಕಾರಿದ್ದಾರೆ.




ಈಗಾಗಲೇ ಡಿ.ಕೆ. ಶಿವಕುಮಾರ್,​ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಹೋಗಿ ಮುಂಬೈ ಹೋಟೆಲ್ ಎದುರುಗಡೆ ಹೈಡ್ರಾಮ ಸೃಷ್ಟಿ ಮಾಡಿದ್ದರು. ಇದೀಗ ಕಾಂಗ್ರೆಸ್​ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಜೆಡಿಎಸ್​ ವರಿಷ್ಠ ಹೆಚ್​.ಡಿ. ದೇವೇಗೌಡ ಮುಂಬೈಗೆ ಭೇಟಿ ನೀಡಲು ಮುಂದಾಗಿದ್ದಾರೆ.


ಈ ಬಗ್ಗೆ ಮಾಹಿತಿ ತಿಳಿದ ಅತೃಪ್ತರು,  ಪದೇ ಪದೇ ನಮ್ಮನ್ನು ಭೇಟಿ ಮಾಡಲು ಮುಂಬೈಗೆ ಬಂದು ನಮ್ಮ ಶಾಂತಿ ಕದಡುತ್ತಿದ್ದಾರೆಂದು ಆರೋಪಿಸಿದ್ದು, ನಮಗೆ ಯಾರನ್ನೂ ಭೇಟಿ ಮಾಡುವುದು ಇಷ್ಟವಿಲ್ಲವೆಂದು ಅತೃಪ್ತ ಶಾಸಕರು ಸ್ಥಳೀಯ ಠಾಣೆ ಮೂಲಕ ಮುಂಬೈ ಪೊಲೀಸ್ ಕಮೀಷನರ್ ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ