ಬಿಜೆಪಿಯಲ್ಲಿ ಬಂಡಾಯದ ಹೊಗೆ: ಕಾಂಗ್ರೆಸ್ ಟಿಕೆಟ್ ಬಯಸಿದ ಬಿಜೆಪಿ ಮಾಜಿ ಸಂಸದ
ಗುರುವಾರ, 31 ಜುಲೈ 2014 (13:35 IST)
ಬಳ್ಳಾರಿ ವಿಧಾನಸಭಾ ಉಪಚುನಾವಣೆ ಟಿಕೆಟ್ ಹಂಚಿಕೆ ಬಿಜೆಪಿಯಲ್ಲಿ ಬಂಡಾಯದ ದಗೆಯನ್ನು ಹೊತ್ತಿಸಿದ್ದು, ರಾಯಚೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಸಣ್ಣ ಫಕೀರಪ್ಪ ಬಿಜೆಪಿ ಹೈಕಮಾಂಡ್ ವಿರುದ್ಧ ಬಂಡಾಯವೆದ್ದಿದ್ದಾರೆ.
ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಘಟಕ ಬೇರೆ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವುದು ಮಾಜಿ ಸಂಸದ ಫಕೀರಪ್ಪ ಅವರಿಗೆ ಆಕ್ರೋಶ ಮೂಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಸಂಸದ ಫಕೀರಪ್ಪ ಬಳ್ಳಾರಿ ಗ್ರಾಮಾಂತರ ವಿಧಾನ ಸಭೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.