ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ; ಶ್ರೀಗಳ ಆರೋಗ್ಯ ವಿಚಾರಿಸಿದ ಅಡ್ವಾಣಿ ಪುತ್ರಿ

ಭಾನುವಾರ, 22 ಡಿಸೆಂಬರ್ 2019 (10:54 IST)
ಉಡುಪಿ : ಅನಾರೋಗ್ಯದ ಹಿನ್ನಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂಬುದಾಗಿ ತಿಳಿದುಬಂದಿದೆ.



ಎದೆಯಲ್ಲಿ ಕಫ ಕಟ್ಟಿಕೊಂಡ ಹಿನ್ನಲೆಯಲ್ಲಿ ತೀವ್ರ ಉಸಿರಾಟ ಸಮಸ್ಯೆ ಎದುರಾದ ಕಾರಣ ಪೇಜಾವರ ಶ್ರೀಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಲಾಗಿತ್ತು. ಶ್ರೀಗಳು ಗುಣಮುಖರಾಗಲಿ ಎಂದು ಹಲವೆಡೆ ಹೋಮ ಹವನಗಳನ್ನು ಮಾಡಲಾಗಿದೆ.


ಇದೀಗ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಶ್ರಿಗಳಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ. ಹಾಗೇ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಪುತ್ರಿ ಪ್ರತಿಭಾ ಫೋನ್ ಮಾಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ