ಮತದಾರರ ಪಟ್ಟಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಿ: ಸಚಿವ ಎಸ್.ಟಿ.ಸೋಮಶೇಖರ್ ಮನವಿ

ಗುರುವಾರ, 21 ಅಕ್ಟೋಬರ್ 2021 (21:48 IST)
ಬೆಂಗಳೂರು, ಅ .21: ಕರ್ನಾಟಕ ಯುವನೀತಿ- 2021 ರೂಪಿಸಲು ಹೊಸ ಪೊಲೀಸರ ಸಮಸ್ಯೆಯನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.  
 
 
ಸ್ವಾಮಿ ವಿವೇಕಾನಂದ ಯುವ ಚಳುವಳಿ ಸಂಸ್ಥಾಪಕರಾದ ಡಾ. ಆರ್ ಬಾಲಸುಬ್ರಹ್ಮಣ್ಯಂ ಅವರ ಅನುಸರಿಸುತ್ತಿರುವ ೧೩ ಸದಸ್ಯರ ಹೊಸ ಸಮಿತಿಯನ್ನು ರಚಿಸಲಾಗಿದೆ. ತರಬೇತಿಯ ಸಮಿತಿಯು ರಾಜ್ಯ ಮಟ್ಟದಲ್ಲಿ ಸಮಗ್ರ ಅಧ್ಯಯನ ನಡೆಸಲು ಅಭಿಪ್ರಾಯ ಸಂಗ್ರಹಿಸಿ ಎರಡು ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. 
 
 
 
ಕರ್ನಾಟಕ ರಾಜ್ಯ ಯುವ ನೀತಿಯನ್ನು 2012ರಲ್ಲಿ ರೂಪಿಸಲಾಗಿದ್ದು, ಸದ್ಯ ಕಾಲಕ್ಕುನುಣವಾಗಿ ಹೊಸ ಯುವ ನೀತಿ ರೂಪಿಸುವುದು ಅವಶ್ಯಕತೆ ಇರುತ್ತದೆ. ಹಾಗಾಗಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ರಾಜ್ಯದ ಯುವ ಜನತೆ ತಮ್ಮ ಉತ್ತಮ ಜೀವನವನ್ನು ಕಟ್ಟಿಕೊಳ್ಳಲು ಹಾಗೂ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಸಮಗ್ರವಾದ ಹಾಗೂ ಕೌಶಲ್ಯಭರಿತ ಇಂದಿನ ಕಾಲಮಾನಕ್ಕೆ ತಕ್ಕಂತೆ ತಜ್ಞರ ಸಮಿತಿ ನೀತಿ ರೂಪಿಸಲಿದೆ ಎಂದು ಸಚಿವ ಡಾ.ನಾರಾಯಣ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಡ್ರಗ್ಸ್ ಸೇರಿದಂತೆ ದುಶ್ಚಟಗಳಿಗೆ ಬಲಿಯಾಗುತ್ತಿದೆ. ಯುವಕರು ದಾರಿ ತಪ್ಪದಂತೆ ಮುನ್ನೆಚ್ಚೆರಿಕೆ ತೆಗೆದುಕೊಳ್ಳವುದು. ತಂತ್ರಜ್ಞಾನ ಹಾಗೂ ಆವಿಷ್ಕಾರಗಳ ಬಗ್ಗೆ ಆದ್ಯತೆ ನೀಡುವುದು. ಯುವ ಸಂಘಟನೆಗಳ ಮೂಲಕ ಕ್ರೀಡೆಗೆ ಒತ್ತು ನೀಡುವುದು. ಉದ್ಯೋಗಕ್ಕೆ ಅಗತ್ಯ ಕೌಶಲ್ಯವನ್ನು ನೀಡುವುದು. ಯುವ ಜನತೆಯಲ್ಲಿ ನಾಯಕತ್ವ ಗುಣವನ್ನು ಬೆಳೆಸುವುದು ಸೇರಿದಂತೆ ಹಲವು ಯುವ ಜನತೆಗೆ ಅನುಕೂಲವಾಗುವಂತಹ ಹೊಸ ನೀತಿಯನ್ನು ರೂಪಿಸಲು ತಜ್ಞರ ಸಮಿತಿ ಸಮಗ್ರ ಅಧ್ಯಯನ ನಡೆಸಿ ವರದಿ ನೀಡಲಿದೆ. 
 
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳ ಮುಖಾಂತರ ಯುವ ಸಮುದಾಯಕ್ಕೆ ಕೋಟ್ಯಂತರ ರೂಪಾಯಿ ವೆಚ್ಚವನ್ನು ಖರ್ಚು ಮಾಡುತ್ತಿದೆ. ಆ ಯೋಜನೆಗಳು ಯುವ ಜನತೆಗೆ ಸರಿಯಾದ ರೀತಿಯಲ್ಲಿ ತಲುಪುವುದು ಹೊಸ ಯುವ ನೀತಿ ರೂಪಿಸುವುದರಿಂದ ಅನುಕೂಲತೆ ಎಂದು ನಾರಾಯಣ ಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ