ರೇಖಾ ಕದಿರೇಶ್ ಮೃತದೇಹ ಕುಟುಂಬಸ್ತರಿಗೆ ಹಸ್ತಾಂತರ

ಶುಕ್ರವಾರ, 25 ಜೂನ್ 2021 (10:16 IST)
ಬೆಂಗಳೂರು: ನಿನ್ನೆ ಧಾರುಣವಾಗಿ ಹತ್ಯೆಗೀಡಾದ ಬಿಜೆಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.


ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ರೇಖಾ ಮೃತದೇಹವನ್ನು ಕುಟುಂಬಸ್ಥರಿಗೆ ನೀಡಲಾಗಿದೆ. ಈ ವೇಳೆ ಸಂಸದ ಪಿ ಸಿ ಮೋಹನ್ ಇದ್ದರು. ಅವರ ಮುಂದೆ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಛಲವಾದಿಪಾಳ್ಯದ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರೇಖಾ ಹತ್ಯೆಯ ಬಗ್ಗೆ ಮಾತನಾಡಿರುವ ಸಂಸದ ಪಿಸಿ ಮೋಹನ್ ಪೊಲೀಸರ ಬಳಿ ಮಾತನಾಡಿದ್ದೇನೆ, ತಪ್ಪಿತಸ್ಥರಿಗೆ ಶೀಘ್ರವೇ ಶಿಕ್ಷೆಯಾಗುತ್ತದೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ