ಕನ್ನಡದ ಖ್ಯಾತ ಕತೆಗಾರ, ಕವಿ ತಿರುಮಲೇಶ್ ನಿಧನ

ಸೋಮವಾರ, 30 ಜನವರಿ 2023 (09:30 IST)
ಬೆಂಗಳೂರು : ಕನ್ನಡದ ಖ್ಯಾತ ಕತೆಗಾರ, ಕವಿ ವಿಮರ್ಶಕ ಕೆ.ವಿ. ತಿರುಮಲೇಶ್ ನಿಧನರಾಗಿದ್ದಾರೆ.

ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ತಿರುಮಲೇಶ್(82) ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಇತ್ತೀಚೆಗೆ ತಿರುಮಲೇಶ್ ಅವರಿಗೆ ಹೃದಯದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಕಳೆದ ವಾರದವರೆಗೂ ಆಸ್ಪತ್ರೆಯಲ್ಲಿದ್ದ ಅವರು ಭಾನುವಾರ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು.  ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ತಿರುಮಲೇಶ್ ಅಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ