ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ

ಗುರುವಾರ, 11 ಜುಲೈ 2019 (10:51 IST)
ಬೆಂಗಳೂರು : ಶಾಸಕರ ರಾಜೀನಾಮೆ ಅಂಗೀಕಾರ ಮಾಡಲು ವಿಳಂಬ ಮಾಡುತ್ತಿರುವ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.



ಸ್ಪೀಕರ್ ಒಂದು ಪಕ್ಷದ ಕಾರ್ಯಕರ್ಯರಂತೆ ನಡೆದುಕೊಳ್ತಿದ್ದಾರೆ. ಸ್ಪೀಕರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡಲಿ. ವಿಧಾನಸೌಧದಲ್ಲಿ ಶಾಸಕರ ಮೇಲೆ ಹಲ್ಲೆ ಮಾಡಲಾಗಿದೆ. ಶಾಸಕರ ಮೇಲಿನ ಹಲ್ಲೆಯನ್ನು ರಾಜ್ಯದ ಜನ ನೋಡಿದ್ದಾರೆ ಎಂದು ಹೇಳಿದ್ದಾರೆ.

 

ಸ್ಪೀಕರ್ ಪಾರದರ್ಶಕವಾಗಿ ಕೆಲಸ ಮಾಡುತ್ತಿರುವುದಾಗಿ ಹೇಳುತ್ತಿದ್ದಾರೆ. ಆದರೆ ಅವರು ಪಾರದರ್ಶಕವಾಗಿ ಕೆಲಸ ಮಾಡುತ್ತಿಲ್ಲ. ಅವರು ಒಂದು ಪಕ್ಷದ ಕಾರ್ಯಕರ್ತರಂತೆ ನಡೆದುಕೊಳ್ತಿದ್ದಾರೆ. ಆದ್ದರಿಂದ ಸ್ಪೀಕರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡಲಿ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ