ದರ್ಶನ್, ಪವಿತ್ರಾ ಗೌಡ ಎಸ್ಕೇಪ್: ಅನುಕುಮಾರ್, ಜಗದೀಶ್ ಗೆ ಜಾಮೀನು ಸಿಕ್ಕರೂ ಶ್ಯೂರಿಟಿ ಕೊಡುವವರಿಲ್ಲ
ಆದರೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಇನ್ನಿಬ್ಬರು ಅರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ ಗೆ ಇನ್ನೂ ಯಾರೂ ಶ್ಯೂರಿಟಿ ನೀಡಲು ಮುಂದೆ ಬಂದಿಲ್ಲ. ಈ ಕಾರಣಕ್ಕೆ ಈ ಇಬ್ಬರೂ ಇನ್ನೂ ಜೈಲಿನಿಂದ ರಿಲೀಸ್ ಆಗಿಲ್ಲ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತರಲು ಅನುಕುಮಾರ್ ಸಹಾಯ ಮಾಡಿದ್ದ.
ಬಾಸ್ ಬಾಸ್ ಎಂದು ಹಿಂದೆ ಹೋಗಿ ಈ ಎಲ್ಲರೂ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರು. ವಿಪರ್ಯಾಸವೆಂದರೆ ಈಗ ಇವರಿಗೆ ಶ್ಯೂರಿಟಿ ನೀಡುವವರೂ ಇಲ್ಲದೇ ಒದ್ದಾಡುತ್ತಿದ್ದಾರೆ. ಇದಿಗ ದರ್ಶನ್ ಸಹಾಯದ ನಿರೀಕ್ಷೆಯಲ್ಲಿ ಈ ಕುಟುಂಬಗಳಿವೆ.