ಹೆದ್ದಾರಿಯಲ್ಲಿ ಶವವಿಟ್ಟು ನ್ಯಾಯಕ್ಕೆ ಆಗ್ರಹ

ಸೋಮವಾರ, 28 ಜನವರಿ 2019 (18:13 IST)
ಆಪ್ತಮಿತ್ರರಿಬ್ಬರ ಕೊಲೆ ಪ್ರಕರಣ ಖಂಡಿಸಿ ಹಾಗೂ ನ್ಯಾಯ ದೊರಕಬೇಕೆಂದು ಒತ್ತಾಯಿಸಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಗಿದೆ. 

ಕೋಟ ಹೆದ್ದಾರಿಯಲ್ಲಿ ಶವ ಇಟ್ಟು ಪ್ರತಿಭಟನೆ ಮಾಡಲಾಗಿದೆ. ಯತೀಶ್ ಹಾಗೂ ಭರತ್ ಮೃತದೇಹಗಳನ್ನು ಇಟ್ಟು ಪ್ರತಿಭಟನೆ ನಡೆಸಲಾಗಿದೆ. ಕೊಲೆಗಾರರನ್ನು ಕೂಡಲೇ ಬಂಧಿಸಬೇಕು. ರೌಡಿಶೀಟರ್ ಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹವನ್ನು ಪ್ರತಿಭಟನಾಕಾರರು ಮಾಡಿದರು. ಒಂದು ಗಂಟೆಗೂ ಅಧಿಕ ಸಮಯ ರಸ್ತೆ ಸಂಚಾರ ಬಂದ್ ಆಗಿತ್ತು.

ಸ್ಥಳಕ್ಕೆ ಎಸ್ ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಕೊಲೆಗಾರರ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಹೇಳಿದರು. 
 
 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ