ಕುರುಬ ಸಮುದಾಯಕ್ಕೆ ಮೀಸಲಾತಿ ಸಿಗದಿದ್ರೆ ಬೆಂಕಿ ಹಚ್ಚುತ್ತೇವೆ; ಸರ್ಕಾರದ ವಿರುದ್ಧ ಕುರುಬರ ಆಕ್ರೋಶ

ಶುಕ್ರವಾರ, 19 ಫೆಬ್ರವರಿ 2021 (13:38 IST)
ಬೆಂಗಳೂರು : ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಕುರುಬರ ಪ್ರತಿಭಟನೆ ಮುಂದುವರಿದಿದ್ದು, ಮೀಸಲಾತಿ ನೀಡದಿದ್ದರೆ ಸರ್ಕಾರಕ್ಕೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ ಎನ್ನಲಾಗಿದೆ.

ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಸಾವಿರಾರು ಕುರುಬರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಅಲ್ಲದೇ ಕುರುಬ ಸಮುದಾಯಕ್ಕೆ ಮೀಸಲಾತಿ ಸಿಗದಿದ್ರೆ ಬೆಂಕಿ ಹಚ್ಚುತ್ತೇವೆ ಎಂದು ಕುರುಬರ ಪ್ರತಿಭಟನಾ ಸ್ಥಳದಲ್ಲಿ ಕುರುಬ ಎಸ್ ಟಿ ಹೋರಾಟ ಸಮಿತಿಯ ಕಾರ್ಯದರ್ಶಿ  ರಾಜೇಂದ್ರ ಸಣ್ಣಕ್ಕಿ ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ