ಶಾಸಕರ ರಾಜೀನಾಮೆ ವಿಚಾರ; ಮತದಾರರ ಅಭಿಪ್ರಾಯವನ್ನು ಸಂಗ್ರಹಿಸಲಿರುವ ಸ್ಪೀಕರ್

ಮಂಗಳವಾರ, 9 ಜುಲೈ 2019 (10:19 IST)
ಬೆಂಗಳೂರು : ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸ್ಪೀಕರ್ ರಮೇಶ್ ಕುಮಾರ್ ಅವರು ಶಾಸಕರ ರಾಜೀನಾಮೆ ಅಂಗೀಕಾರ ಪ್ರಕ್ರಿಯೆಯನ್ನು ಮುಗಿಸ್ತಾರಾ ಅಥವಾ ವಿಳಂಬ ಮಾಡ್ತಾರಾ ಎಂಬ ಕುತೂಹಲ ರಾಜ್ಯದ ಜನರಲ್ಲಿ ಮೂಡಿಸಿದೆ.



ಈಗಾಗಲೇ ಮೈತ್ರಿ ಸರ್ಕಾರದ 15 ಶಾಸಕರು ರಾಜೀನಾಮೆ ನೀಡಿದ್ದರು. ಆದರೆ ಸೋಮವಾರ ಸ್ಪೀಕರ್ ಇರಲಿಲ್ಲ. ಹೀಗಾಗಿ ಇಂದು  ಸ್ಪೀಕರ್ ರಮೇಶ್ ಕುಮಾರ್ ಅವರು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಕುತೂಹಲ ರಾಜ್ಯದ ಜನರಲ್ಲಿ ಮೂಡಿದೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಕುಮಾರ್ ಅವರು, ಮತದಾರರ ಅಭಿಪ್ರಾಯವನ್ನು ಸಂಗ್ರಹಿಸುತ್ತೇನೆ. ಸಾರ್ವಜನಿಕರ ದೂರು ಆಲಿಸಿದ  ಬಳಿಕ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ